Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:5 - ಪರಿಶುದ್ದ ಬೈಬಲ್‌

5 ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಜೆ ತರ್ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾರ್ ದೆವಾಚ್ಯಾ ವರ್ತಿ ಹೊತ್ತೊ ತೆಚೊ ಪ್ರೆಮ್ ಪರಿಪುರ್ನ್ ಹೊತಾ ಅನಿ ಹೆಚ್ಯಾ ವೈನಾ ಅಮಿ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾಂವ್ ಮನ್ತಲೆ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:5
32 ತಿಳಿವುಗಳ ಹೋಲಿಕೆ  

ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.


ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.


ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.


“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.


ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.


ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.


ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು.


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.


ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಈ ಆಜ್ಞೆಯನ್ನು ಕೇಳಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು