Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:15 - ಪರಿಶುದ್ದ ಬೈಬಲ್‌

15 ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ, ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಪ್ನಾಚ್ಯಾ ಭಾವಾಚ್ಯಾ ಅನಿ ಭೆನಿಚ್ಯಾ ವಿರೊದ್ ಕರ್ತಲೊ ಹರಿ ಎಕ್ಲೊಬಿ ಖುನಿಗಾರ್ ಹೊವ್ನ್ ರ್‍ಹಾತಾ. ಅನಿ ಖುನಿಗಾರಾಚ್ಯಾ ಭುತ್ತುರ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ರ್‍ಹಾಯ್ನಾ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:15
19 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.


“ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳುವವನು ತನ್ನ ಸಹೋದರನನ್ನು ದ್ವೇಷಿಸುತ್ತಿದ್ದರೆ, ಅವನಿನ್ನೂ ಅಂಧಕಾರದಲ್ಲಿದ್ದಾನೆ.


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು