Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:1 - ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರಿತಿಚ್ಯಾನು, ಹ್ಯಾ ಜಗಾತ್ ಝುಟಿ ಶಿಕಾಪಾ ಶಿಕ್ವುತಲೆ ಯೆಲ್ಲ್ಯಾ ವೈನಾ, ತುಮಿ ಸಗ್ಳ್ಯಾ ಆತ್ಮ್ಯಾಚಿ ಗೊಸ್ಟಿಚ್ಯಾ ವರ್ತಿ ವಿಶ್ವಾಸ್ ಕರಿನಸ್ತಾನಾ, ತುಮಿ ದೆವಾಚ್ಯಾ ಆತ್ಮ್ಯಾಕ್ನಾ ಯೆಲ್ಲಿ ಗೊಸ್ಟಿಯಾ ಹೊಯ್ಕಿ ನಾ, ಮನುನ್ ಪರಿಕ್ಷಾ ಕರುನ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:1
29 ತಿಳಿವುಗಳ ಹೋಲಿಕೆ  

ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ಇಬ್ಬರು ಅಥವಾ ಮೂವರು ಪ್ರವಾದಿಗಳು ಮಾತ್ರ ಮಾತಾಡಬೇಕು. ಅವರು ಹೇಳುವುದನ್ನು ಇತರರು ವಿವೇಚಿಸಬೇಕು.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


“ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ?


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


“ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ಪ್ರವಾದನೆಯನ್ನು ಹೀನೈಸಬೇಡಿ.


ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.


ನನ್ನ ಪ್ರಿಯ ಸ್ನೇಹೀತರೇ, ನಾನು ನಿಮಗೆ ಹೊಸ ಆಜ್ಞೆಯನ್ನು ಬರೆಯುತ್ತಿಲ್ಲ. ಮೊದಲಿಂದಲೂ ಈ ಆಜ್ಞೆಯು ನಿಮಗಿತ್ತು. ನೀವು ಈಗಾಗಲೇ ಕೇಳಿರುವ ವಾಕ್ಯವೇ ಈ ಆಜ್ಞೆಯಾಗಿದೆ.


ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು