Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:5 - ಪರಿಶುದ್ದ ಬೈಬಲ್‌

5 ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಜಗಾಕ್ ಬಗುನ್ ಜಗಾಚ್ಯಾ ನಮನಿಚ್ ಬೊಲ್ತ್ಯಾತ್ ಅನಿ ಹ್ಯೊ ಜಗ್ ತೆನಿ ಸಾಂಗ್ತಲ್ಯಾಕ್ ಕಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:5
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ.


ನಾನು ಇವರಿಗೆ ನಿನ್ನ ವಾಕ್ಯಗಳನ್ನು ಕೊಟ್ಟಿದ್ದೇನೆ. ಈ ಲೋಕವು ಇವರನ್ನು ದ್ವೇಷಿಸುತ್ತದೆ. ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಆದ್ದರಿಂದ ಈ ಲೋಕವು ಇವರನ್ನು ದ್ವೇಷಿಸಿದೆ.


ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ.


“ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು