Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:11 - ಪರಿಶುದ್ದ ಬೈಬಲ್‌

11 ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಿ ಸಾಕ್ಷಿ ಖಲಿ ಮಟ್ಲ್ಯಾರ್, ಅಮ್ಕಾ ದೆವಾನ್ ಅಮ್ಕಾ ನಿರಂತರ್ ಜಿವನ್ ದಿಲ್ಯಾನಾಯ್, ತೊ ಜಿವ್ ತೆಚ್ಯಾ ಲೆಕಾಚ್ಯಾ ಭುತ್ತುರ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:11
37 ತಿಳಿವುಗಳ ಹೋಲಿಕೆ  

ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


(ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ಆದ್ದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


“ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.


ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು.


ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು