Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:19 - ಪರಿಶುದ್ದ ಬೈಬಲ್‌

19 ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸಗ್ಳೊ ಜಗ್ ಸೈತಾನಾಚ್ಯಾ ಅದಿಕಾರಾತ್ ರ್‍ಹಾರ್ಲ್ಯಾಬಿ, ಅಮಿ ದೆವಾಕ್ ಸಮಂದ್ ಪಡಲ್ಲೆ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:19
29 ತಿಳಿವುಗಳ ಹೋಲಿಕೆ  

ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.


ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.


ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


“ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು