Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:10 - ಪರಿಶುದ್ದ ಬೈಬಲ್‌

10 ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:10
22 ತಿಳಿವುಗಳ ಹೋಲಿಕೆ  

“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


“ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”


ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.


ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.


ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ ಆಲಯದ ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.


ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು