Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:28 - ಪರಿಶುದ್ದ ಬೈಬಲ್‌

28 ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:28
12 ತಿಳಿವುಗಳ ಹೋಲಿಕೆ  

ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು.


ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.


ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.


ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.


ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂತಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.


ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.


ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು.


ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.


ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.


ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು