Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:22 - ಪರಿಶುದ್ದ ಬೈಬಲ್‌

22 ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:22
19 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.


ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.


ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ರಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ.


ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.


ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು