Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:11 - ಪರಿಶುದ್ದ ಬೈಬಲ್‌

11 ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:11
14 ತಿಳಿವುಗಳ ಹೋಲಿಕೆ  

ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.


ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.


ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.


ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು