Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:13 - ಪರಿಶುದ್ದ ಬೈಬಲ್‌

13 ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:13
11 ತಿಳಿವುಗಳ ಹೋಲಿಕೆ  

ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.


ನಂತರ ರಾಜನು ಶಿಮ್ಮಿಗೆ, “ನಿನ್ನನ್ನು ಕೊಲ್ಲುವುದಿಲ್ಲ” ಎಂದು ವಾಗ್ದಾನ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು