Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:15 - ಪರಿಶುದ್ದ ಬೈಬಲ್‌

15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:15
12 ತಿಳಿವುಗಳ ಹೋಲಿಕೆ  

“ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.


ಸಮುವೇಲನು ಇಸ್ರೇಲರನ್ನು ಮಿಚ್ಪೆಗೆ ಕರೆಸಿ, ಯೆಹೋವನ ಸನ್ನಿಧಿಯಲ್ಲಿ ಸಭೆಸೇರಿಸಿದನು.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.


ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.


ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು