Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:10 - ಪರಿಶುದ್ದ ಬೈಬಲ್‌

10 ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:10
18 ತಿಳಿವುಗಳ ಹೋಲಿಕೆ  

ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.


ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ಪೂಜಿಸತೊಡಗಿದರು.


ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.


ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.


ಮಿದ್ಯಾನ್ಯರು ಕೆಟ್ಟದ್ದನ್ನೆಲ್ಲಾ ಮಾಡಿದರು. ಅದಕ್ಕಾಗಿ ಇಸ್ರೇಲರು ಸಹಾಯಕೋರಿ ಯೆಹೋವನಲ್ಲಿ ಮೊರೆಯಿಟ್ಟರು.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು