Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:13 - ಪರಿಶುದ್ದ ಬೈಬಲ್‌

13 ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:13
9 ತಿಳಿವುಗಳ ಹೋಲಿಕೆ  

ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.


ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.


ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.


ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.


ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು