Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:17 - ಪರಿಶುದ್ದ ಬೈಬಲ್‌

17 ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:17
13 ತಿಳಿವುಗಳ ಹೋಲಿಕೆ  

ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!


ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.


ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.


ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.


ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.


ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು