Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:18 - ಪರಿಶುದ್ದ ಬೈಬಲ್‌

18 ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:18
10 ತಿಳಿವುಗಳ ಹೋಲಿಕೆ  

ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು