Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:19 - ಪರಿಶುದ್ದ ಬೈಬಲ್‌

19 ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:19
24 ತಿಳಿವುಗಳ ಹೋಲಿಕೆ  

ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.


ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.


“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೊ!” ಎಂದು ಹೇಳಿದರು.


ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.


ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.


ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.


ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.


ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು