Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:35 - ಪರಿಶುದ್ದ ಬೈಬಲ್‌

35 ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:35
10 ತಿಳಿವುಗಳ ಹೋಲಿಕೆ  

ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ಜನರ ಹತ್ತಿರಕ್ಕೆ ಹೋಗಿ, ‘ನಿಮ್ಮ ದನಕುರಿಗಳನ್ನು ಇಲ್ಲಿಗೆ ತಂದು ಕೊಯ್ದು ತಿನ್ನಬೇಕೆಂದೂ ಮಾಂಸವನ್ನು ರಕ್ತ ಸಮೇತವಾಗಿ ತಿಂದು ಯೆಹೋವನಿಗೆ ವಿರೋಧವಾಗಿ ಪಾಪಮಾಡಬಾರದೆಂದೂ ತಿಳಿಸು’” ಎಂದು ಹೇಳಿ ಕಳುಹಿಸಿದನು. ಆ ರಾತ್ರಿ ಎಲ್ಲರೂ ಅವರವರ ಪಶುಗಳನ್ನು ಅಲ್ಲಿಗೆ ತಂದು ಕೊಯ್ದು ತಿಂದರು.


ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು