Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:7 - ಪರಿಶುದ್ದ ಬೈಬಲ್‌

7 ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:7
8 ತಿಳಿವುಗಳ ಹೋಲಿಕೆ  

ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ.


ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು