1 ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.
ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.