Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:12 - ಪರಿಶುದ್ದ ಬೈಬಲ್‌

12 ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:12
12 ತಿಳಿವುಗಳ ಹೋಲಿಕೆ  

ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.


ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.


ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.


ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.


ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು