Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:13 - ಪರಿಶುದ್ದ ಬೈಬಲ್‌

13 ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:13
17 ತಿಳಿವುಗಳ ಹೋಲಿಕೆ  

ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ.


ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”


ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.


ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.


ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.


ಸೌಲನು ಸರ್ವಾಂಗಹೋಮವನ್ನು ಅರ್ಪಿಸಿ ಮುಗಿಸುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸಲು ಹೊರಗೆ ಹೋದನು.


ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಆತನು ಕಳುಹಿಸಿದಲ್ಲಿಗೆ ನಾನು ಹೋಗಿ ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ.


ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು.


ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು