Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:15 - ಪರಿಶುದ್ದ ಬೈಬಲ್‌

15 ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:15
9 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞವನ್ನರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು