Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:19 - ಪರಿಶುದ್ದ ಬೈಬಲ್‌

19 ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:19
11 ತಿಳಿವುಗಳ ಹೋಲಿಕೆ  

ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.


ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.


ಚಿದ್ಕೀಯನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ಅವನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದನು. ಪ್ರವಾದಿಯಾದ ಯೆರೆಮೀಯನು ದೇವರ ಸಂದೇಶವನ್ನು ಕೊಡುತ್ತಾ ಬಂದನು. ಆದರೆ ಚಿದ್ಕೀಯನು ದೇವರೆದುರಿಗೆ ತನ್ನನ್ನು ತಗ್ಗಿಸಿಕೊಳ್ಳದೆ ಯೆರೆಮೀಯನ ಮೂಲಕ ಬಂದ ದೇವರ ಆಜ್ಞೆಗಳಿಗೆ ವಿಧೇಯನಾಗಲಿಲ್ಲ.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಆತನು ಕಳುಹಿಸಿದಲ್ಲಿಗೆ ನಾನು ಹೋಗಿ ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ.


ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು