Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:28 - ಪರಿಶುದ್ದ ಬೈಬಲ್‌

28 ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:28
20 ತಿಳಿವುಗಳ ಹೋಲಿಕೆ  

ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.


ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.


ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ.


ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.


ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.


ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ


ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.


ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು