Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:29 - ಪರಿಶುದ್ದ ಬೈಬಲ್‌

29 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:29
16 ತಿಳಿವುಗಳ ಹೋಲಿಕೆ  

“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು