Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:9 - ಪರಿಶುದ್ದ ಬೈಬಲ್‌

9 ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:9
10 ತಿಳಿವುಗಳ ಹೋಲಿಕೆ  

ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.


ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.


ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು.


ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.


ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.


ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು