Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:11 - ಪರಿಶುದ್ದ ಬೈಬಲ್‌

11 ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನಂತರ ಸಮುವೇಲನು ಇಷಯನನ್ನು - ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ ಎಂದು ಕೇಳಲು ಅವನು - ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ ಎಂದು ಉತ್ತರಕೊಟ್ಟನು. ಆಗ ಸಮುವೇಲನು - ಅವನನ್ನು ಕರೇಕಳುಹಿಸು; ಅವನು ಬರುವವರೆಗೂ ನಾವು ಊಟಕ್ಕೆ ಕೂತುಕೊಳ್ಳಬಾರದು ಎಂದು ಹೇಳಲು ಇಷಯನು ಅವನನ್ನು ಕರತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:11
8 ತಿಳಿವುಗಳ ಹೋಲಿಕೆ  

“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


“ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗೆನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು.


ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.


ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.


ಇಷಯನು ತನ್ನ ಏಳು ಜನ ಮಕ್ಕಳನ್ನು ಸಮುವೇಲನಿಗೆ ತೋರಿಸಿದನು. ಆದರೆ ಸಮುವೇಲನು, “ಯೆಹೋವನು ಇವರಲ್ಲಿ ಯಾರೊಬ್ಬನನ್ನೂ ಆರಿಸಿಕೊಳ್ಳಲಿಲ್ಲ” ಎಂದನು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು