Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:14 - ಪರಿಶುದ್ದ ಬೈಬಲ್‌

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:14
17 ತಿಳಿವುಗಳ ಹೋಲಿಕೆ  

ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.


ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.


ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.


ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು,


ಸೌಲನ ಸೇವಕರು ಅವನಿಗೆ, “ದೇವರು ಕಳುಹಿಸಿರುವ ದುರಾತ್ಮವು ನಿನ್ನನ್ನು ಪೀಡಿಸುತ್ತಿದೆ.


ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.


ದೇವರು ಕಳುಹಿಸಿದ ದುರಾತ್ಮವು ಸೌಲನ ಮೈಮೇಲೆ ಬಂದಾಗಲೆಲ್ಲಾ, ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ದುರಾತ್ಮವು ಸೌಲನನ್ನು ಬಿಟ್ಟುಹೋಗಿ ಅವನಿಗೆ ಉಪಶಮನವಾಗುತ್ತಿತ್ತು.


ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು