Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:21 - ಪರಿಶುದ್ದ ಬೈಬಲ್‌

21 ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು; ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವದಕ್ಕೆ ನೇವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:21
13 ತಿಳಿವುಗಳ ಹೋಲಿಕೆ  

ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.


ನಿಮ್ಮ ನಾಯಕರುಗಳಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.


ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು