Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:5 - ಪರಿಶುದ್ದ ಬೈಬಲ್‌

5 ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:5
16 ತಿಳಿವುಗಳ ಹೋಲಿಕೆ  

“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.


“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.


ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ಆ ಸಮಯದಲ್ಲಿ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಹತ್ತಿರಕ್ಕೆ ಹೋದನು. ಬತ್ಷೆಬೆಳು, “ನೀನು ಸಮಾಧಾನದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು. ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು