ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.