Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:25 - ಪರಿಶುದ್ದ ಬೈಬಲ್‌

25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:25
11 ತಿಳಿವುಗಳ ಹೋಲಿಕೆ  

ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.


ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ಪೇತ್ರನು, “ಬೇರೆ ಜನರು ತೆರಿಗೆಗಳನ್ನು ಸಲ್ಲಿಸುತ್ತಾರೆ” ಎಂದು ಉತ್ತರಕೊಟ್ಟನು. ಯೇಸು ಪೇತ್ರನಿಗೆ, “ಹಾಗಾದರೆ ರಾಜನ ಮಕ್ಕಳು ತೆರಿಗೆ ಕೊಡಬೇಕಿಲ್ಲ.


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.


ಗೊಲ್ಯಾತನನ್ನು ಕೊಲ್ಲುವದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು