Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:32 - ಪರಿಶುದ್ದ ಬೈಬಲ್‌

32 ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದಾವೀದನು ಸೌಲನಿಗೆ - ಆ ಫಿಲಿಷ್ಟಿಯನ ನಿವಿುತ್ತವಾಗಿ ಯಾವನೂ ಎದೆಗೆಡಬಾರದು; ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು ಅನ್ನಲು ಸೌಲನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:32
12 ತಿಳಿವುಗಳ ಹೋಲಿಕೆ  

ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.


ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು