Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:43 - ಪರಿಶುದ್ದ ಬೈಬಲ್‌

43 ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:43
14 ತಿಳಿವುಗಳ ಹೋಲಿಕೆ  

ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.


ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ.


ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.


ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯ ತಲೆಯನ್ನು ಕತ್ತರಿಸಿಹಾಕುತ್ತೇನೆ, ನನಗೆ ಅಪ್ಪಣೆಕೊಡು” ಎಂದನು.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.


ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.


ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.


ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು