Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:44 - ಪರಿಶುದ್ದ ಬೈಬಲ್‌

44 ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:44
12 ತಿಳಿವುಗಳ ಹೋಲಿಕೆ  

ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ನಂತರ ಒಬ್ಬ ದೇವದೂತನು ಸೂರ್ಯನ ಮೇಲೆ ನಿಂತಿರುವುದನ್ನು ನಾನು ನೋಡಿದೆನು. ಆ ದೇವದೂತನು ಆಕಾಶದಲ್ಲಿ ಹಾರುತ್ತಿರುವ ಹಕ್ಕಿಗಳಿಗೆಲ್ಲ ಹೀಗೆ ಹೇಳುತ್ತಿದ್ದನು: “ದೇವರ ಮಹಾಭೋಜನಕ್ಕೆ ಒಟ್ಟುಗೂಡಿ ಬನ್ನಿರಿ.


ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.


ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.


ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು