Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:50 - ಪರಿಶುದ್ದ ಬೈಬಲ್‌

50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:50
9 ತಿಳಿವುಗಳ ಹೋಲಿಕೆ  

ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.


ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ. ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು.


ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.


ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.


ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.


ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು