Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:52 - ಪರಿಶುದ್ದ ಬೈಬಲ್‌

52 ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಇಸ್ರಯೇಲರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ಕಣಿವೆಯ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್, ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಇಸ್ರಾಯೇಲ್ಯರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿವಿುನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:52
10 ತಿಳಿವುಗಳ ಹೋಲಿಕೆ  

ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.


ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.


ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು.


ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.


ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.


ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.


ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು