Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:8 - ಪರಿಶುದ್ದ ಬೈಬಲ್‌

8 ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ನಿಂತು ಇಸ್ರಾಯೇಲ್‍ಸೈನ್ಯದವರನ್ನು ಕೂಗಿ ಅವರಿಗೆ - ನೀವು ಯುದ್ಧಮಾಡಬಂದದ್ದೇಕೆ? ನಾನು ಫಿಲಿಷ್ಟಿಯನು, ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:8
5 ತಿಳಿವುಗಳ ಹೋಲಿಕೆ  

ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು. “ಆಗ ನೀವು ರಾಜನಿಗೆ ಸೇವಕರಾಗುವಿರಿ;


ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.


ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು