Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:13 - ಪರಿಶುದ್ದ ಬೈಬಲ್‌

13 ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇವಿುಸಿದನು; ಇವನು ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:13
7 ತಿಳಿವುಗಳ ಹೋಲಿಕೆ  

ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?


ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು