Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:16 - ಪರಿಶುದ್ದ ಬೈಬಲ್‌

16 ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಇಸ್ರಯೇಲರಿಗೆ ಹಾಗು ಯೆಹೂದ್ಯರಿಗೆ ದಾವೀದನ ಮೇಲೆ ಮಿಗಿಲಾದ ಪ್ರೀತಿ. ಏಕೆಂದರೆ ಅವನು ತಮ್ಮ ಸಂಗಡವೇ ಬಂದು ಮುಂದಾಳತ್ವ ವಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:16
9 ತಿಳಿವುಗಳ ಹೋಲಿಕೆ  

ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.


ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.


ದಾವೀದನು ಬಹಳವಾಗಿ ಯಶ್ವಸಿಯಾಗುತ್ತಿರುವುದನ್ನು ಕಂಡ ಸೌಲನು ದಾವೀದನಿಗೆ ಮತ್ತಷ್ಟು ಭಯಪಟ್ಟನು.


ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು