Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:21 - ಪರಿಶುದ್ದ ಬೈಬಲ್‌

21 ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:21
11 ತಿಳಿವುಗಳ ಹೋಲಿಕೆ  

ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು.


ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.


ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.


ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು