Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:23 - ಪರಿಶುದ್ದ ಬೈಬಲ್‌

23 ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:23
12 ತಿಳಿವುಗಳ ಹೋಲಿಕೆ  

ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು.


ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ.


ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.


ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.


ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.


ಆದರೆ ದಾವೀದನು, “ನಾನು ಪ್ರಮುಖ ಕುಲದವನೂ ಅಲ್ಲ; ಪ್ರಮುಖನಾದ ವ್ಯಕ್ತಿಯೂ ಅಲ್ಲ! ರಾಜನ ಮಗಳನ್ನು ಮದುವೆಯಾಗಲು ನಾನು ಯೋಗ್ಯನಲ್ಲ” ಎಂದು ಹೇಳಿದನು.


ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.


ದಾವೀದನು ತಿಳಿಸಿದ್ದನ್ನೆಲ್ಲ ಸೌಲನ ಅಧಿಕಾರಿಗಳು ಸೌಲನಿಗೆ ಹೇಳಿದರು.


ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು