11 ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.
11 ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
11 ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ
11 ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ
11 ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ
ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.
ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.