Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:18 - ಪರಿಶುದ್ದ ಬೈಬಲ್‌

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಮಠದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:18
11 ತಿಳಿವುಗಳ ಹೋಲಿಕೆ  

ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.


ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು.


ದಾವೀದನು ರಾಮದ ಪಾಳೆಯದಲ್ಲಿರುವ ಸಂಗತಿಯು ಸೌಲನಿಗೆ ತಿಳಿದುಬಂದಿತು.


ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.


ನಂತರ ಸೌಲನು ರಾಮದ ಹತ್ತಿರವಿರುವ ಪಾಳೆಯಕ್ಕೆ ಹೋದನು. ದೇವರಾತ್ಮವು ಸೌಲನ ಮೈಮೇಲೂ ಬಂದಿತು. ಅವನೂ ಪ್ರವಾದಿಸಲಾರಂಭಿಸಿದನು. ಸೌಲನು ರಾಮದ ಪಾಳೆಯದವರೆಗೂ ಪ್ರವಾದಿಸುತ್ತಾ ಹೋದನು.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು