1 ಸಮುಯೇಲ 2:13 - ಪರಿಶುದ್ದ ಬೈಬಲ್13 ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿ |
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”