Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:13 - ಪರಿಶುದ್ದ ಬೈಬಲ್‌

13 ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:13
5 ತಿಳಿವುಗಳ ಹೋಲಿಕೆ  

ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.


ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.


ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’


ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು