Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:12 - ಪರಿಶುದ್ದ ಬೈಬಲ್‌

12 ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಿಬ್ಬರೂ ಅಡವಿಗೆ ಹೋದರು. ಅಲ್ಲಿ ಯೋನಾತಾನನು ದಾವೀದನಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರನೇ ಸಾಕ್ಷಿ! ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ, ನಿನ್ನ ಮೇಲೆ ಅವರಿಗೆ ದಯೆಯುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:12
10 ತಿಳಿವುಗಳ ಹೋಲಿಕೆ  

ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು.


ನನ್ನ ತಂದೆಯು ನಿನಗೆ ಕೇಡುಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ.


ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೆಷಿನಲ್ಲಿ ನೆಲೆಸಿದನು.


ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು