Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:26 - ಪರಿಶುದ್ದ ಬೈಬಲ್‌

26 ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:26
11 ತಿಳಿವುಗಳ ಹೋಲಿಕೆ  

ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.


ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.


ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು