Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:30 - ಪರಿಶುದ್ದ ಬೈಬಲ್‌

30 ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:30
14 ತಿಳಿವುಗಳ ಹೋಲಿಕೆ  

ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.


ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.


ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.


ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು